This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

National NewsState News

ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ- ಆರ್‌ ಅಶೋಕ್

ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ- ಆರ್‌ ಅಶೋಕ್

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು ಆರ್‌.ಅಶೋಕ ಭೇಟಿಯಾಗಿ ಸಾಂತ್ವನ ಹೇಳಿದ ಅವರು,ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಇಲ್ಲಿಗೆ ಬಂದ ಸಚಿವರು ಯಾವುದೇ ವ್ಯವಸ್ಥೆ ಮಾಡಿಲ್ಲ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದರು.

ಡಾ.ಜಿ.ಪರಮೇಶ್ವರ್‌ ಅವರಿಗೆ ಇಲಾಖೆಯಲ್ಲಿ ಆಸಕ್ತಿಯೂ ಇಲ್ಲ, ಹಿಡಿತವೂ ಇಲ್ಲ. ಗೃಹ ಇಲಾಖೆಯನ್ನು ಸಿಎಂ, ಡಿಸಿಎಂ ಮತ್ತು ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಣೆ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಉಳಿಯಬೇಕೆಂದರೆ ಅವರಾಗಿಯೇ ಸಿಬಿಐ ತನಿಖೆಗೆ ವಹಿಸುವುದು ಉತ್ತಮ. ಕಾಂಗ್ರೆಸ್‌ನ ಕೆ.ಜೆ.ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್‌ ಚಿಟ್‌ ನೀಡಿತ್ತು. ತಪ್ಪಿತಸ್ಥರಲ್ಲವೆಂದರೆ ಕ್ಲೀನ್‌ ಚಿಟ್‌ ಸಿಗುತ್ತದೆ. ಇದು ಬಡವರ ಹಣವಾಗಿದ್ದು, ವಾಲ್ಮೀಕಿ ಸಮುದಾಯವರಿಗೆ ಸಾಲ ನೀಡಲು ಈ ಹಣ ಬಳಕೆಯಾಗುತ್ತಿತ್ತು. ಈಗ ಸರ್ಕಾರ ಎಲ್ಲ ಬಗೆಯ ಸಾಲಗಳನ್ನು ಸ್ಥಗಿತಗೊಳಿಸಿದೆ ಎಂಬ ಸುದ್ದಿ ಬಂದಿದೆ. ಪರಿಶಿಷ್ಟ ಪಂಗಡದವರಿಗೆ ಈಗ ಸಾಲವೇ ಇಲ್ಲದೆ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು.

ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಸಚಿವರು ಹಾಗೂ ಮುಖ್ಯಮಂತ್ರಿಯ ಬೆಂಬಲವಿಲ್ಲದೆ ಇಂತಹ ಅವ್ಯವಹಾರ ನಡೆಯಲು ಸಾಧ್ಯವಿಲ್ಲ. ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು.

Nimma Suddi
";