This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Politics News

ಸಿಎಂ ಸಿದ್ದು ಅವರನ್ನು ಪ್ರಿ ಹ್ಯಾಂಡ್ ಆಗಿ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಜಾರಕಿಹೊಳಿ ಟಾಂಗ್

ಸಿಎಂ ಸಿದ್ದು ಅವರನ್ನು ಪ್ರಿ ಹ್ಯಾಂಡ್ ಆಗಿ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ: ಡಿಸಿಎಂ ಡಿಕೆಶಿ ವಿರುದ್ಧ ಜಾರಕಿಹೊಳಿ ಟಾಂಗ್

ಬೆಳಗಾವಿ: ಸಿದ್ದರಾಮಯ್ಯ ಒಳ್ಳೆಯ ಸಿಎಂ ಆದ್ರೆ 2018ರಲ್ಲಿದ್ದಂತೆ ಈಗ ಇಲ್ಲ. ಕೊತ್ವಾಲ್‌ ಶಿಷ್ಯ ಡಿಸಿಎಂ ಆಗಿದ್ದು, ಹೀಗಾಗಿ ಸಿದ್ದರಾಮಯ್ಯಗೆ ಬೆಲೆ ಇಲ್ಲ. ಕೊತ್ವಾಲ್‌ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಎಲ್ಲಾ ಅವರ ಹೆಸರಿಗೆ ಆಗ್ತಿದ್ದು, ದೇವರು ದೊಡ್ಡವನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಗಿದ್ದಾರೆ. ಕೊತ್ವಾಲ್‌ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿಸಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ನನಗೆ ಶಿಕ್ಷೆ ಮಾಡಿಸಬೇಕು ಅಂದುಕೊಂಡಿದ್ದ ಆದರೆ ಆಗಲಿಲ್ಲ. ಸಿಡಿ ಪ್ರಕರಣದಲ್ಲಿ ವಿಫಲನಾಗಿ ಈಗ 420 ಕೇಸ್ ದಾಖಲು ಮಾಡಿಸಿ ಮಾಧ್ಯಮಗಳಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದು, ಡಿ.ಕೆ.ಶಿವಕುಮಾರ್‌ರವರ ಅಪ್ಪ ಬಂದ್ರೂ ನನ್ನನ್ನು ಹತ್ತಿಕ್ಕಲು ಆಗಲ್ಲ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಿ ಹ್ಯಾಂಡ್ ಆಗಿ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ. ಅವರ ಮೇಲೆ ಒತ್ತಡ ತರುವ ಕೆಲಸವನ್ನು ಮಾಡುತ್ತಿದ್ದು, ಡಿಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ತಂದು ಸಿಎಂ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.ಬೆಳಗಾವಿ ಡಿಸಿಸಿ ಬ್ಯಾಂಕ್​ ಅಧ್ಯಕ್ಷರ ನೇಮಕಾತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ವಿವರಿಸಿದರು.