This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsLocal NewsState News

ವಿಡಿಯೋ ಕಣ್ಗಾವಲು & ವೀಕ್ಷಣೆ ತಂಡಗಳಿಗೆ ತರಬೇತಿ ಕಾರ್ಯಾಗಾರ

ವಿಡಿಯೋ ಕಣ್ಗಾವಲು & ವೀಕ್ಷಣೆ ತಂಡಗಳಿಗೆ ತರಬೇತಿ ಕಾರ್ಯಾಗಾರ

ಬಾಗಲಕೋಟೆ:

ಲೋಕಸಭಾ ಚುನಾವಣೆ-೨೦೨೪ರ ಹಿನ್ನಲೆಯಲ್ಲಿ ರಚಿಸಲಾದ ವಿಡಿಯೋ ಕಣ್ಗಾವಲು ಮತ್ತು ವಿಡಿಯೋ ವೀಕ್ಷಣೆ ತಂಡಗಳಿಗೆ ಶನಿವಾರ ತರಬೇತಿ ಕಾರ್ಯಗಾರ ಜರುಗಿತು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ವಿಡಿಯೋ ಕಣ್ಗಾವಲು ಮತ್ತು ವೀಕ್ಷಣೆ ತಂಡಗಳ ಪಾತ್ರ ಮಹತ್ವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಕೆಲಸ ನಿರ್ವಹಿಸಬೇಕು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ವಿಡಿಯೋ ಕಣ್ಗಾವಲು ಮತ್ತು ವೀಕ್ಷಣೆ ತಂಡಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಡೆಸುವ ಬಹಿರಂಗ ಸಭೆ, ಸಮಾರಂಭಗಳ ಘಟನಾವಳಿಗಳನ್ನು ಚಿತ್ರೀಕರಣ ಮಾಡುವದರಿಂದ ಸತ್ಯ, ವಾಸ್ತವಿಕ, ವಿಶ್ವಾಸಾರ್ಹ ನಿರ್ಧಾರ ತೆಗೆದುಕೊಳ್ಳಲು, ನೀತಿ ಸಂಹಿತೆ ಹಾಗೂ ಕಾನೂನು ಉಲ್ಲಂಘನೆಗಳನ್ನು ಪತ್ತೆ ಹಚ್ಚಲು ಸಹಾಯವಾಗುತ್ತದೆ ಎಂದರು.

ಚುನಾವಣಾ ವೆಚ್ಚ ಮತ್ತು ಕಾನೂನು ಉಲ್ಲಂಘನೆಯ ಪ್ರಕರಣಗಳ ಬಗ್ಗೆ ವಿಡಿಯೋ ದಾಖಲಾತಿ ಮುಖ್ಯವಾಗಿದ್ದು, ತಾವು ಚಿತ್ರೀಕರಣ ಮಾಡಿದ ವಿಡಿಯೋವನ್ನು ಮತ್ತೊಬ್ಬರಿಗೆ ಕಳುಹಿಸುವುದಾಗಲಿ, ಇಲ್ಲವೇ ಯಾವುದೇ ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದು, ಗುರುತಿಸಿಕೊಂಡಿರಬಾರದು. ಅಂತ ಮಾಹಿತಿ ದೊರೆತಲ್ಲಿ ಕಾನೂನಿನಡಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ವಿಡಿಯೋ ಗ್ರಾಫರ್‌ಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಎಚ್ಚರಿಕೆ ನೀಡಿದರು.

ತಾವು ಸಹ ಚುನಾವಣಾ ಆಯೋಗದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ ನೇಮಕವಾದ ವಿಡಿಯೋ ಗ್ರಾಫರ್‌ಗಳು ಅಪರಾಧ ಹಿನ್ನಲೆ ಉಳ್ಳವರು ಇರಬಾರದು. ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿರಬಾರದು. ಪಕ್ಷದ ಪರವಾಗಿ ಸಹಾನುಭೂತಿ ಹೊಂದಿರಬಾರದು.

ಉಲ್ಲಂಘನೆ ಪ್ರಕರಣಗಳು ಮೊದಲು ತಮಗೆ ತಿಳಿಯಬೇಕು. ಉಲ್ಲಂಘನೆ ಪ್ರಕರಣದ ಬಗ್ಗೆ ಸಂಪೂರ್ಣ ಚಿತ್ರೀಕರಣ ಆಗಬೇಕು. ಆಗ ಮಾತ್ರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಶಶೀಧರ ಕುರೇರ ಮಾತನಾಡಿ ರಾಜಕೀಯ ಪಕ್ಷಗಳು ನಡೆಸುವ ಸಭೆ, ಸಮಾರಂಭ, ಗಲಭೆ, ದೊಂಬಿ, ಹಿಂಸಾಚಾರ, ಕಲ್ಲು ತೂರಾಟ ಮತದಾರರನ್ನು ಭಯಪಡಿಸುವುದು, ಮತದಾರರಿಗೆ ಹಣ, ಸೀರೆ, ಲಿಕ್ಕರ ಮತ್ತೀತರ ವಸ್ತುಗಳನ್ನು ಹಂಚುವುದು ಇವುಗಳ ಬಗ್ಗೆ ಗಮನ ಹರಿಸಿ ಚಿತ್ರೀಕರಣ ಮಾಡಲು ತಿಳಿಸಿದರು.

ಕಾರ್ಯಾಗಾರದಲ್ಲಿ ಯುಕೆಪಿ ಮಹಾ ವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಚುನಾವಣಾ ವೆಚ್ಚಗಳ ನೋಡಲ್ ಅಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಚುನಾವಣಾ ತಹಶೀಲ್ದಾರ ಪಂಪಯ್ಯ ಸೇರಿದಂತೆ ವಿಡಿಯೋ ಗ್ರಾಫರ್‌ಗಳು ಪಾಲ್ಗೊಂಡಿದ್ದರು.

";