This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಬಸವಲಿಂಗಯ್ಯ ಹಿರೇಮಠರಿಗೆ ಶ್ರದ್ಧಾಂಜಲಿ

ಬಾಗಲಕೋಟೆ

ನಾಡಿನ ಬಹುಮುಖ ಪ್ರತಿಭಾವಂತ ಕಲಾವಿದರು, ಕನ್ನಡ ನಾಡು ಕಂಡ ಶ್ರೇಷ್ಠ ಜಾನಪದ ಗಾಯಕ ಬಸವಲಿಂಗಯ್ಯ ಹಿರೇಮಠ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಜಾನಪದ ಗಾರುಡಿಗ ಬಸಲಿಂಗಯ್ಯ ಹಿರೇಮಠ ನಿಧನದ ಹಿನ್ನೆಲೆಯಲ್ಲಿ ನವನಗರದ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ಹಮ್ಮಿಕೊಂಡ ಶ್ರದ್ಧಾಂಜಲಿ, ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಜಾನಪದ ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

ಗುಳೇದಗುಡ್ಡ ತಾಲೂಕು ಕಸಾಪ ಅದ್ಯಕ್ಷ ಪ್ರೊ.ಸಿ.ಎಂ.ಜೋಶಿ, ಡಾ.ಚಂದ್ರಶೇಖರ ಕಾಳನ್ನವರ, ಮುಧೋಳ ಬಿಇಒ ಮಹಾಂತೇಶ ನರಸಗೌಡರ, ಕಸಾಪ ಅಧ್ಯಕ್ಷ ಸಂಗಮೇಶ ನೀಲಗುಂದ, ಸಂಗಮೇಶ ಬ್ಯಾಳಿ ಇತರರು ಇದ್ದರು.

 

Nimma Suddi
";