This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsState News

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ:ಯಾವ ಯಾವ ಖಾತೆಗಳಿಗೆ ಎಷ್ಟು ಹಣ ವರ್ಗ, ಇಲ್ಲಿದೆ ಮಾಹಿತಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ:ಯಾವ ಯಾವ ಖಾತೆಗಳಿಗೆ ಎಷ್ಟು ಹಣ ವರ್ಗ, ಇಲ್ಲಿದೆ ಮಾಹಿತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್​ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಆರ್​ಬಿಎಲ್ ಬ್ಯಾಂಕ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ತರಬೇತಿ ಸಂಸ್ಥೆಗಳು, ಮಾನವ ಸಂಪನ್ಮೂಲ ನಿರ್ವಹಣೆ, ಭದ್ರತಾ ಏಜೆನ್ಸಿ, ವಾಣಿಜ್ಯ ವಹಿವಾಟು ಸಂಸ್ಥೆ, ಸಾಫ್ಟ್‌ವೇರ್‌ ಕಂಪನಿಗಳ ಹೆಸರಿನಲ್ಲಿರುವ ಖಾತೆಗಳಿಗೆ ‌ಮಾರ್ಚ್‌ 3ರಿಂದ ಮಾರ್ಚ್‌ 30ರ ಅವಧಿಯಲ್ಲಿ 49.52 ಕೋಟಿ ಮತ್ತು ವ್ಯಕ್ತಿಗಳ ಹೆಸರಿನಲ್ಲಿರುವ ಎಂಟು ಖಾತೆಗಳಿಗೆ ಮಾರ್ಚ್‌ 30ರಂದು ಒಂದೇ ಚೆಕ್‌ ಬಳಸಿ 40.10 ಕೋಟಿ ರೂ. ವರ್ಗಾವಣೆಯಾಗಿದೆ.
ವರ್ಗಾವಣೆಯಾದ ಹಣ
ಮಾರ್ಚ್‌ 5: ಪಿಫ್‌ಮಸ್‌ ಮ್ಯಾನೇಜ್‌ಮೆಂಟ್‌ ಪ್ರೈ.ಲಿ. ₹5.35 ಕೋಟಿ ವರ್ಗ

ಮಾರ್ಚ್‌ 5: ಝೆಲಿಯಂಟ್‌ ಟ್ರೈನಿಂಗ್‌ ಆ್ಯಂಡ್ ಕನ್ಸಲ್ಟಿಂಗ್‌ ಸರ್ವೀಸ್‌; ₹4.97 ಕೋಟಿ

ಮಾರ್ಚ್‌ 6; ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜೀಸ್‌ ಲಿ. (ಮೈಂಡ್ ಟ್ರೀ ):₹4.53 ಕೋಟಿ

ಮಾರ್ಚ್‌ 6; ವೈಎಂ ಎಂಟರ್‌ಪ್ರೈಸಸ್‌; ₹4.98 ಕೋಟಿ

ಮಾರ್ಚ್‌ 6; ಮನ್ಹು ಎಂಟರ್‌ಪ್ರೈಸಸ್‌; ₹5.01 ಕೋಟಿ

ಮಾರ್ಚ್‌ 6; ಅಕಾರ್ಡ್‌ ಬ್ಯುಸಿನೆಸ್‌ ಸರ್ವೀಸಸ್‌; ₹ 5.46 ಕೋಟಿ

ಮಾರ್ಚ್‌ 6; ಮೆ. ಟ್ಯಾಲೆಂಕ್‌ ಸಾಫ್ಟ್‌ವೇರ್‌ ಇಂಡಿಯಾ ಪ್ರೈ.ಲಿ.; ₹5.10 ಕೋಟಿ

ಮಾರ್ಚ್‌ 11; ನಿತ್ಯ ಸೆಕ್ಯುರಿಟಿ ಸರ್ವೀಸಸ್‌; ₹4.47 ಕೋಟಿ

ಮಾರ್ಚ್‌ 11; ವೋಲ್ಟಾ ಟೆಕ್ನಾಲಜಿ ಸರ್ವೀಸಸ್‌; ₹5.12 ಕೋಟಿ

ಮಾರ್ಚ್‌ 23;ವಿ6 ಬ್ಯುಸಿನೆಸ್‌ ಸಲ್ಯೂಷನ್ಸ್‌; ₹4.50 ಕೋಟಿ

ಮಾರ್ಚ್‌ 30; ಎಂಟು ವೈಯಕ್ತಿಕ ಖಾತೆಗಳಿಗೆ; ₹40.10 ಕೋಟಿ

ಒಟ್ಟು ₹89.62 ಕೋಟಿ ವರ್ಗಾವಣೆಯಾಗಿದೆ.

ಹಣ ಹೈದರಾಬಾದ್​​ಗೆ ವರ್ಗಾವಣೆ ಎಂಬ ಮಾಹಿತಿ ತೊರೆತ ಹಿನ್ನೆಲೆಯಲ್ಲಿ ಎಸ್​ಐಟಿಯ ಒಂದು ತಂಡ ಹೈದರಾಬಾದ್​ಗೆ ತೆರಳಿದೆ.

ಏನಿದು ಪ್ರಕರಣ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಹಣ ವರ್ಗಾವಣೆ ಆಗಿರುವ ಖಾತೆಗಳನ್ನು ಹೊಂದಿರುವ ಬಹುತೇಕ ಖಾಸಗಿ ಕಂಪನಿಗಳು ಬೆಂಗಳೂರಿನವು. ಕೆಲವು ಮಾತ್ರ ಹೊರ ರಾಜ್ಯದಲ್ಲಿವೆ. ಈ ಎಲ್ಲ ಕಂಪನಿಗಳ ಹೆಸರಿನಲ್ಲಿ ಆರ್‌ಬಿಎಲ್‌ ಬ್ಯಾಂಕ್‌ನ ಬಂಜಾರಾ ಹಿಲ್ಸ್‌ ಶಾಖೆಯಲ್ಲಿ ಖಾತೆ ತೆರೆದು ಅಕ್ರಮವಾಗಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

";