This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ: ವಿಜಯೇಂದ್ರ ಲೇವಡಿ

ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ: ವಿಜಯೇಂದ್ರ ಲೇವಡಿ

ಮೈಸೂರು: ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ.” ಇದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟಾಂಗ್ ನೀಡಿದರು.

ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಗುರುವಾರ ಆಗಮಿಸಿದ್ದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
224 ಕ್ಷೇತ್ರಕ್ಕೆ ಒಂದೇ ಒಂದು ರೂ ಅನುದಾನವನ್ನೂ ಸರ್ಕಾರ ಕೊಡುತ್ತಿಲ್ಲ. ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟಪಡುವ ಪರಿಸ್ಥಿತಿ ಬಂದಿದೆ ಎಂದರು.

ಈಗ ಶ್ರೀಮಂತ ದೇವಾಲಯಗಳಿಗೆ ಕನ್ನ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕನ್ನಡ ನಾಡು-ನುಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಕ್ಕೆ ತರುತ್ತಿದ್ದಾರೆ. ಸರ್ಕಾರದ ಅಜೆಂಡಾ ಏನು ಎಂಬುದು ಆದೇಶಗಳಿಂದ ಗೊತ್ತಾಗುತ್ತದೆ . ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡ ವಿರೋಧಿ ಚಿಂತನೆಯಲ್ಲಿದೆ .

ರಾಜ್ಯದಲ್ಲಿ ಬರ ಪರಿಸ್ಥಿತಿ ಇಲ್ಲ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆಲೋಕಸಭೆ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಆತಂಕದಲ್ಲಿದೆ. ಹೀಗಾಗಿ ದೆಹಲಿ ಚಲೋ ನಾಟಕ ಮಾಡಿ ಕೇಂದ್ರದ ಮೇಲೆ ಗೂಬೆ ಕೂರಿಸ್ತಿದ್ದಾರೆ ಎಂದು ಆರೋಪಿಸಿದರು.

";