This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ-ಸಿಎಂ ಸಿದ್ದರಾಮಯ್ಯ

ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ-ಸಿಎಂ ಸಿದ್ದರಾಮಯ್ಯ

ಕೋಲಾರ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಇಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಪರವಾಗಿ ರೋಡ್​ ಶೋ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

. ಈ ವೇಳೆ ಮಾತನಾಡಿದ ಅವರು, ‘ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ ಎನ್ನುವ ಮೂಲಕ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್​ ಆಗುತ್ತದೆ ಎಂಬ ಊಹಾಪೋಹಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದರು.

ಈ ಹಿಂದೆ ಸ್ವ-ಪಕ್ಷದ ಶಾಸಕರು ಸೇರಿದಂತೆ ಬಿಜೆಪಿ, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಹೇಳಿತ್ತು. ಆದರೆ, ನಾವು ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದು, ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು, ಲೋಕಸಭಾ ಚುನಾವಣೆಯ ನಂತರವೂ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ‘ಅಧಿಕೃತವಾಗಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ, ನಾವು ಕೂಡ ಅವರ ಪರವಾಗಿ ಮನವಿ ಮಾಡ್ತೀವಿ, ನೀವು ಮತಗಟ್ಟೆಗೆ ತೆರಳಿ ಹಸ್ತದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡುತ್ತೇವೆ. ನಾವು ಸುಮ್ಮನೆ ಮತ ಕೇಳುತ್ತಿಲ್ಲ, ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

ಐದು ಕೆಜಿ ಅಕ್ಕಿ ಕೊಡ್ತೀವಿ ಎಂದು ಹೇಳಿ ಬಿಜೆಪಿ ಅವರು‌ ಮೋಸ ಮಾಡಿದರು, ಕೇಂದ್ರ ಸರ್ಕಾರ ನಮಗೆ ಏನೂ ಮಾಡಿಲ್ಲ, ಅವರಿಗೆ ಓಟು ಹಾಕಬೇಡಿ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 25 ಗ್ಯಾರಂಟಿ ಘೋಷಿಸಿದೆ. ಜೊತೆಗೆ ಈ ಹಿಂದೆ​ ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದ್ದೇವೆಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಕಿತ್ತೊಗೆಯಬೇಕು. ಮೋದಿ ಅವರನ್ನು ಇಳಿಸಿ ರಾಹುಲ್ ಗಾಂಧಿ ಪ್ರಧಾನಿ ಮಾಡಬೇಕು ಎಂದು ಸೂಚಿಸಿದರು.

";