This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ಪ್ರತಿಭಟನೆ ಅಲ್ಲ, ಬದಲಾಗಿ ನಾಟಕ : ಬಿವೈ ವಿಜಯೇಂದ್ರ ವಾಗ್ದಾಳಿ

ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ಪ್ರತಿಭಟನೆ ಅಲ್ಲ, ಬದಲಾಗಿ ನಾಟಕ : ಬಿವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ಪ್ರತಿಭಟನೆ ಅಲ್ಲ, ಬದಲಾಗಿ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಬುಧವಾರ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ” ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ಅಧಿಕಾರಕ್ಕೆ ಬಂದು ಕೊಟ್ಟ ಭರವಸೆ ಈಡೇರಿಸಲು ಸಾಧ್ಯವಾಗದೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ದೆಹಲಿ ಚಲೋ ನಡೆಸಿದೆ ಎಂದು ಹೇಳಿದರು.

ರೈತರ ಆತ್ಮಹತ್ಯೆ ಹೆಚ್ಚಾಗಿದ್ದು, ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮತ್ತೊಂದು ನಾಟಕ ಮಾಡಿದರು. ಎರಡು ಸಾವಿರ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದು, ಆ ಹಣ ಕೂಡಾ ರೈತರಿಗೆ ಮುಟ್ಟಿಲ್ಲ ಎಂದು ಕಿಡಿಕಾರಿದರು.ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ” ರೈತರ, ಮಹಿಳೆಯರ, ಬಡವರ ಪಾಲಿಗೆ ಸರ್ಕಾರ ಸತ್ತು ಹೋಗಿದೆ ಎಂದು ತಿಳಿಸಿದರು.

ವರ್ಗಾವಣೆ ಮಾಡಿ ಹಣ ಲೂಟಿ ಮಾಡುವುದು ಬಿಟ್ಟು ಏನು ಮಾಡಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಮೋಸ ಮಾಡಿದ್ದು, ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಕಾಂಗ್ರೆಸ್ ಮಾಡ್ತಿದೆ. ರಾಜಕೀಯ ಸ್ಟಂಟ್ ಬಿಟ್ಟು ಬಿಡಿ. ಇದಕ್ಕೆ ಜನರು ಮರಳಾಗುವುದಿಲ್ಲ. ಜವಾಬ್ದಾರಿಯಿಂದ ಪಲಾಯನ ಮಾಡಿದ್ದೀರಿ. ನಾಟಕ ಮಾಡುವ ಮೂಲಕ ನೈತಿಕತೆ ಕಳೆದುಕೊಂಡಿದ್ದೀರಿ ಎಂದು ಕಿಡಿಕಾರಿದರು.

 

Nimma Suddi
";