This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು : ಸವದಿ ಕಿಡಿ

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು : ಸವದಿ ಕಿಡಿ

ಚಿಕ್ಕೋಡಿ: ಬಿಎಸ್​​ ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ದೆ. ನನಗೆ ವಿಷ ಕುಡಿಯಲೂ ಹಣವಿಲ್ಲ, ನಿನಗೆ ಎಲ್ಲಿಂದ ಅನುದಾನ ಕೊಡಲಿ ಎಂದಿದ್ದರು ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಎಸ್​ ಯಡಿಯೂರಪ್ಪ ಮತ್ತು ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಬಲಪಡಿಸಿದ್ದು, K.S.ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ. ಜಗದೀಶ್​​ ಶೆಟ್ಟರ್‌ಗೆ ಮೊದಲು ಬಾಲ ಕಟ್ ಮಾಡಿದರು. ಈಗೀಗ ಜಗದೀಶ್​ ಶೆಟ್ಟರ್​ ಬಾಲ ಮತ್ತೆ ಚಿಗುರುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಅಥಣಿ ಪೂರ್ವಭಾಗದ ಜನರು ಬರಗಾಲದಿಂದ ಬಳಲುತ್ತಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ನೀರಾವರಿ ಯೋಜನೆಗೆ ಚಾಲನೆ ನೀಡಿ, ನೀರಿನ ಬರ ನೀಗಿಸಿದ್ದಾರೆ. ಅಥಣಿ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನ ನೀಡಿದೆ. ಹಲವಾರು ಯೋಜನೆಗಳಿಗೆ ಕೋಟ್ಯಂತರ ಅನುದಾನ ನೀಡಿದ್ದಾರೆ ಎಂದರು.

ಎರಡು ದಿನಗಳ ಹಿಂದೆ ಸಚಿವರು ಪೂರ್ವಭಾವಿ ಸಭೆ ಮಾಡೋಣ. ಶಿವಯೋಗಿ ನಾಡು ಅಥಣಿಯಿಂದ ಪ್ರಚಾರ ಆರಂಭಿಸೋಣ ಎಂದು ಹೇಳಿದ್ದು, ಯಾವುದೇ ಪಕ್ಷ ಮೊದಲ ಸಭೆ ಅಥಣಿಯಿಂದ ಆರಂಭಿಸಿದರೆ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗುತ್ತೆ ಎನ್ನುವುದು ನಂಬಿಕೆ. ಈಶಾನ್ಯ ದಿಕ್ಕಿನಿಂದ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆಯ ತಂತ್ರ ಪ್ರತಿತಂತ್ರಗಳನ್ನ ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನ ಜನರಿಗೆ ತಲುಪಿಸಬೇಕು. ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದಾರೆ ಎಂದು ಸೂಚಿಸಿದರು.

";