This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ: ಯಡಿಯೂರಪ್ಪ

ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ: ಯಡಿಯೂರಪ್ಪ

ಬೈಂದೂರು: ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮಾತನಾಡಿ, ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಅವರು 3 ಲಕ್ಷಕ್ಕೂ ಅಧಿಕ ಅಂತರದಲ್ಲಿ ಜಯಿಸಲಿದ್ದಾರೆ. ಕಾಂಗ್ರೆಸ್‌ ಅವರು ಹತಾಶೆಯಿಂದ ರಾಹುಲ್‌ ಗಾಂಧಿ ಅವರನ್ನು ಶಿವಮೊಗ್ಗಕ್ಕೆ ಕರೆಸಿದ್ದಾರೆ. ಸಮಾರಂಭದಲ್ಲಿ ಏನೇನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಕಾಂಗ್ರೆಸ್‌ ಎಷ್ಟು ಅಸಂಘಟಿತವಾಗಿದೆ ಎಂಬುದು ತಿಳಿಯುತ್ತದೆ. ಮತದಾರರು ಬಿಜೆಪಿ ಜತೆಗೆ ಇದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್‌ ಶಾ ಅವರು ಈಗಾಗಲೇ ಸ್ಪಷ್ಟತೆ ನೀಡಿದ್ದಾರೆ ಎಂದು ಹೇಳಿದರು.

ಬೈಂದೂರಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ದ ಬಿಜೆಪಿ ಅಭ್ಯರ್ಥಿ, ತಮ್ಮ ಪುತ್ರ ಬಿವೈ ರಾಘವೇಂದ್ರ ಅವರ ಪರವಾಗಿ ಬೃಹತ್‌ ರೋಡ್‌ ಶೋಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚಿದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ವಿವರಿಸಿದರು.

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದು, ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿವೈ ರಾಘವೇಂದ್ರ ಅವರು ಕನಿಷ್ಠ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್‌ ದೊರಕುವ ವಿಶ್ವಾಸವಿದೆ ಎಂದು ಸೂಚಿಸಿದರು.

Nimma Suddi
";